22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

ಮಂಗಳೂರು: ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ್ ಪ್ರಸಾದ್ ಅವರು ಇಂದು(ಮಾ.1) ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು.
ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಮುದ್ರಣ ಮಾಧ್ಯಮಕ್ಕೆ ನೀಡಿರುವ ಅಪಾರ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya
error: Content is protected !!