September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ವಿಮಲ ರವರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಮಾ.1 ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಕೊಕ್ಕಡ ಹೋಬಳಿ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಗ್ರಾಮಸಭೆ ನಡೆಸಿಕೊಟ್ಟರು.

ಈ ವೇಳೆ ಇಲಾಖಾ ಅಧಿಕಾರಿಗಳು, ಆಶಾಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಉಪಸ್ಥಿತರಿದ್ದು ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾ.ಪಂ. ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಗ್ರಾಮಸಭೆಯಲ್ಲಿ ಭಾಗವಹಿಸಿದರು.

ಗ್ರಾಮ ಸಭೆ ವರದಿ ಹಾಗೂ ಅನುಪಾಲನಾ ವರದಿಯನ್ನು ಗುಮಾಸ್ತ ದೇವಿಪ್ರಸಾದ್ ಬೊಳ್ಮ ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಸ್ವಾಗತಿಸಿ, ಜಮಾ ಖರ್ಚು ಹಾಗೂ ವಾರ್ಡು ಸಭೆಯ ವರದಿಯನ್ನು ಪಂ. ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಮಂಡಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya
error: Content is protected !!