ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸಂಗಡಿ : ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ್ದಿದ್ದು ಈ ಬಗ್ಗೆ ಫೆ.29ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ಆರಂಬೋಡಿ – ಪಡ್ಯಾರಬೆಟ್ಟು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಬೊಳ್ಳಾಜೆ ಎಂಬಲ್ಲಿಂದ ಶಾಂತಿಕಾಡು ಕಡೆಗೆ ವಸಂತರವರು ಸಹಸವಾರರಾಗಿ ಸವಾರಿ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನ ನಂ: ಕೆಎ 19 ಹೆಚ್‌ ಎನ್‌ 0984 ನೇದನ್ನು ಆರೋಪಿತ ಸವಾರ ಎಡ್ವರ್ಡ್‌ ಎಂಬವರು ಇಳಿಜಾರು ಹಾಗೂ ಕಿರಿದಾದ ಪ್ರದೇಶದಲ್ಲಿ ಎದುರಿನಿಂದ ಅಂದರೆ ಪಡ್ಯಾರಬೆಟ್ಟು ಕಡೆಯಿಂದ ಬರುತ್ತಿದ್ದ ಟಿಪ್ಪರ್‌ ಲಾರಿಯನ್ನು ಕಂಡು ಒಮ್ಮೆಲೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿದ ಪರಿಣಾಮ ದ್ವಿಚಕ್ರ ವಾಹನವು ಡಾಮಾರು ರಸ್ತೆಯ ಅಂಚಿನಲ್ಲಿ ಅಂದರೆ ತಗ್ಗು(ಗುಂಡಿ) ಪ್ರದೇಶದಲ್ಲಿ ಚಲಾಯಿಸಿದಾಗ ಸಹಸವಾರರಾಗಿ ಕುಳಿತಿದ್ದ ವಸಂತರವರ ಹಿಡಿತ ತಪ್ಪಿ ದ್ವಿಚಕ್ರ ವಾಹನದಿಂದ ರಸ್ತೆಗೆ ಕುಸಿದು ಬಿದ್ದು, ಬೆನ್ನಿಗೆ ಗುದ್ದಿದ ಪರಿಣಾಮ ತೀವ್ರ ನೋವುಂಟಾದವರನ್ನು ಆರೋಪಿ ಸವಾರ ಹಾಗೂ ಇತರರು ಸೇರಿ ಖಾಸಗಿ ವಾಹನದಲ್ಲಿ ಕಾರ್ಕಳದ ಸ್ಪಂದನಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Related posts

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya
error: Content is protected !!