ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 2017-28 ನೇ ಸಾಲಿನ ವಿದ್ಯಾರ್ಥಿ ಡಾ.ಗೋವಿನದನ್ ಪಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ ಅಂಕ ಗಳಿಸಿ ಫೆ.26ರಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 26ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕವನ್ನು ಕುಲಾಧಿಪತಿಗಳಾದ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೂಟ್ ಇವರು, ರಾಷ್ಟ್ರೀಯ ವೈದ್ಯಕೀಯ ಆಯೋಗ, ನವದೆಹಲಿ ಇದರ ಅಧ್ಯಕ್ಷರಾದ, ಡಾ. ಬಿ.ಎನ್ .ಗಂಗಾಧರ್, ಕರ್ನಾಟಕದ ವ್ಯೆದ್ಯಕೀಯ ಶಿಕ್ಷಣ ಸಚಿವರಾದ ಹಾಗೂ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿಗಳಾದ ಡಾ.ಶರಣ ಪ್ರಕಾಶ್ ಆರ್ ಪಾಟಿಲ್ ಮತ್ತು ವಿಶ್ವವಿದ್ಯಾನಿಲಯದ ಉಪಕುಲಪತಿಗಳು ಹಾಗೂ ಕುಲಸಚಿವರ ಸಮ್ಮುಖದಲ್ಲಿ ಪ್ರದಾನ ಮಾಡಿದರು.

ಎಸ್.ಡಿ.ಎಂ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ, ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಯು ನಮ್ಮ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮುಂದುವರಿಯುತ್ತಿದ್ದು ಅವರ ಶೈಕ್ಷಣಿಕ ವೆಚ್ಚವನ್ನು ಸಂಪೂರ್ಣ ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ಶೆಟ್ಟಿಯವರು ತಿಳಿಸಿರುತ್ತಾರೆ.

Related posts

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya
error: Content is protected !!