July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 2017-28 ನೇ ಸಾಲಿನ ವಿದ್ಯಾರ್ಥಿ ಡಾ.ಗೋವಿನದನ್ ಪಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ ಅಂಕ ಗಳಿಸಿ ಫೆ.26ರಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 26ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕವನ್ನು ಕುಲಾಧಿಪತಿಗಳಾದ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೂಟ್ ಇವರು, ರಾಷ್ಟ್ರೀಯ ವೈದ್ಯಕೀಯ ಆಯೋಗ, ನವದೆಹಲಿ ಇದರ ಅಧ್ಯಕ್ಷರಾದ, ಡಾ. ಬಿ.ಎನ್ .ಗಂಗಾಧರ್, ಕರ್ನಾಟಕದ ವ್ಯೆದ್ಯಕೀಯ ಶಿಕ್ಷಣ ಸಚಿವರಾದ ಹಾಗೂ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿಗಳಾದ ಡಾ.ಶರಣ ಪ್ರಕಾಶ್ ಆರ್ ಪಾಟಿಲ್ ಮತ್ತು ವಿಶ್ವವಿದ್ಯಾನಿಲಯದ ಉಪಕುಲಪತಿಗಳು ಹಾಗೂ ಕುಲಸಚಿವರ ಸಮ್ಮುಖದಲ್ಲಿ ಪ್ರದಾನ ಮಾಡಿದರು.

ಎಸ್.ಡಿ.ಎಂ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ, ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಯು ನಮ್ಮ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮುಂದುವರಿಯುತ್ತಿದ್ದು ಅವರ ಶೈಕ್ಷಣಿಕ ವೆಚ್ಚವನ್ನು ಸಂಪೂರ್ಣ ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ಶೆಟ್ಟಿಯವರು ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!