23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಾಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ನಡೆದಿದೆ.

ಹಾವೇರಿ ಯಳಗಚ್ಚು ಗ್ರಾಮ, ಕರ್ಜಗಿ ಹೋಬಳಿ ನಿವಾಸಿ ಮಂಜಪ್ಪ ಬರಮಪ್ಪ ತೋಟಿಗೇರ್‌ (40) ಎಂಬವರ ದೂರಿನಂತೆ, ಮಂಜಪ್ಪ ಹಾಗೂ ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ಎಂಬವರು ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಮೈಪಾಳ ವೆಂಟೆಂಡ್‌ ಡ್ಯಾಮ್‌ ಬ್ರಿಡ್ಜ್‌ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕೆಲಸ ಮಾಡಿಕೊಂಡಿದ್ದು, ಮಾ.01 ರಂದು ಮದ್ಯಾಹ್ನ, ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ರವರು ನೀರಿನ ಟ್ಯಾಂಕರ್‌ ನಲ್ಲಿ ನೀರು ತುಂಬಿಸಿಕೊಂಡು, ಟ್ಯಾಂಕರ್‌ ನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಟ್ರಾಕ್ಟರ್‌ ಪಲ್ಟಿಯಾಗಿ ಚಾಲಕ ಸುರೇಶ್‌ ನು ಟ್ರಾಕ್ಟರ್ ನ ಅಡಿಯಲ್ಲಿ ಬಿದ್ದಿರುವುದಾಗಿದೆ. ಆಗ ಸ್ಥಳದಲ್ಲಿದ್ದವರು ಟ್ರಾಕ್ಟರ್‌ ನ್ನು ಆತನ ಮೇಲಿಂದ ಎತ್ತಿ ಬದಿಗೆ ನಿಲ್ಲಿಸಿ, ಆತನನ್ನು ಆರೈಕೆ ಮಾಡಲಾಗಿ, ಆತನ ತಲೆ ಜಜ್ಜಿ ಹೋಗಿ ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ: 15/2024 ಕಲಂ: 304 (A), ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!