23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಾಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ನಡೆದಿದೆ.

ಹಾವೇರಿ ಯಳಗಚ್ಚು ಗ್ರಾಮ, ಕರ್ಜಗಿ ಹೋಬಳಿ ನಿವಾಸಿ ಮಂಜಪ್ಪ ಬರಮಪ್ಪ ತೋಟಿಗೇರ್‌ (40) ಎಂಬವರ ದೂರಿನಂತೆ, ಮಂಜಪ್ಪ ಹಾಗೂ ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ಎಂಬವರು ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಮೈಪಾಳ ವೆಂಟೆಂಡ್‌ ಡ್ಯಾಮ್‌ ಬ್ರಿಡ್ಜ್‌ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕೆಲಸ ಮಾಡಿಕೊಂಡಿದ್ದು, ಮಾ.01 ರಂದು ಮದ್ಯಾಹ್ನ, ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ರವರು ನೀರಿನ ಟ್ಯಾಂಕರ್‌ ನಲ್ಲಿ ನೀರು ತುಂಬಿಸಿಕೊಂಡು, ಟ್ಯಾಂಕರ್‌ ನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಟ್ರಾಕ್ಟರ್‌ ಪಲ್ಟಿಯಾಗಿ ಚಾಲಕ ಸುರೇಶ್‌ ನು ಟ್ರಾಕ್ಟರ್ ನ ಅಡಿಯಲ್ಲಿ ಬಿದ್ದಿರುವುದಾಗಿದೆ. ಆಗ ಸ್ಥಳದಲ್ಲಿದ್ದವರು ಟ್ರಾಕ್ಟರ್‌ ನ್ನು ಆತನ ಮೇಲಿಂದ ಎತ್ತಿ ಬದಿಗೆ ನಿಲ್ಲಿಸಿ, ಆತನನ್ನು ಆರೈಕೆ ಮಾಡಲಾಗಿ, ಆತನ ತಲೆ ಜಜ್ಜಿ ಹೋಗಿ ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ: 15/2024 ಕಲಂ: 304 (A), ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya
error: Content is protected !!