26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ 57 ವರ್ಷದ ಮಧುಸೂದನ್ ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು. ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಆಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!