ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ 57 ವರ್ಷದ ಮಧುಸೂದನ್ ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು. ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಆಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Comment

error: Content is protected !!