ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

ಬೆಳ್ತಂಗಡಿ: ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ.ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಾ.1ರಂದು ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಪೂಜ್ಯ ಅಮರಕೀರ್ತಿ ಮುನಿಮಹಾರಾಜರು ಹಾಗೂ ಮೂಡಬಿದ್ರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಧ್ಯಕ್ಶತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಎಲ್ಲರೂ ಭಾವನೆಯಿಂದ ಬಾಹುಬಲಿ ಆಗಬೇಕು. ಮಸ್ತಕಾಭಿಷೇಕದ ಸವಿ ನೆನಪನ್ನು ಸದಾ ಸ್ಮರಿಸಿಕೊಂಡು ಸಾರ್ಥಕ ಹಾಗೂ ಪವಿತ್ರ ಜೀವನ ನಡೆಸಬೇಕು.

ಸಚಿವ ಡಿ.ಸುಧಾಕರ್ ಮತ್ತು ಪದ್ಮಪ್ರಸಾದ ಅಜಿಲ ಅವರನ್ನು ಗೌರವಿಸಲಾಯಿತು

ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧಕ್ಶ ಡಾ | ಪದ್ಮಪ್ರಸಾದ ಅಜಿಲ ಸ್ವಾಗತಿಸಿದರು, ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ ಧನ್ಯವಾದವಿತ್ತರು. ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya
error: Content is protected !!