23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 2017-28 ನೇ ಸಾಲಿನ ವಿದ್ಯಾರ್ಥಿ ಡಾ.ಗೋವಿನದನ್ ಪಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ ಅಂಕ ಗಳಿಸಿ ಫೆ.26ರಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 26ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕವನ್ನು ಕುಲಾಧಿಪತಿಗಳಾದ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೂಟ್ ಇವರು, ರಾಷ್ಟ್ರೀಯ ವೈದ್ಯಕೀಯ ಆಯೋಗ, ನವದೆಹಲಿ ಇದರ ಅಧ್ಯಕ್ಷರಾದ, ಡಾ. ಬಿ.ಎನ್ .ಗಂಗಾಧರ್, ಕರ್ನಾಟಕದ ವ್ಯೆದ್ಯಕೀಯ ಶಿಕ್ಷಣ ಸಚಿವರಾದ ಹಾಗೂ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿಗಳಾದ ಡಾ.ಶರಣ ಪ್ರಕಾಶ್ ಆರ್ ಪಾಟಿಲ್ ಮತ್ತು ವಿಶ್ವವಿದ್ಯಾನಿಲಯದ ಉಪಕುಲಪತಿಗಳು ಹಾಗೂ ಕುಲಸಚಿವರ ಸಮ್ಮುಖದಲ್ಲಿ ಪ್ರದಾನ ಮಾಡಿದರು.

ಎಸ್.ಡಿ.ಎಂ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ, ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಯು ನಮ್ಮ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮುಂದುವರಿಯುತ್ತಿದ್ದು ಅವರ ಶೈಕ್ಷಣಿಕ ವೆಚ್ಚವನ್ನು ಸಂಪೂರ್ಣ ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ಶೆಟ್ಟಿಯವರು ತಿಳಿಸಿರುತ್ತಾರೆ.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya
error: Content is protected !!