ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 2017-28 ನೇ ಸಾಲಿನ ವಿದ್ಯಾರ್ಥಿ ಡಾ.ಗೋವಿನದನ್ ಪಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ ಅಂಕ ಗಳಿಸಿ ಫೆ.26ರಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 26ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕವನ್ನು ಕುಲಾಧಿಪತಿಗಳಾದ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೂಟ್ ಇವರು, ರಾಷ್ಟ್ರೀಯ ವೈದ್ಯಕೀಯ ಆಯೋಗ, ನವದೆಹಲಿ ಇದರ ಅಧ್ಯಕ್ಷರಾದ, ಡಾ. ಬಿ.ಎನ್ .ಗಂಗಾಧರ್, ಕರ್ನಾಟಕದ ವ್ಯೆದ್ಯಕೀಯ ಶಿಕ್ಷಣ ಸಚಿವರಾದ ಹಾಗೂ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿಗಳಾದ ಡಾ.ಶರಣ ಪ್ರಕಾಶ್ ಆರ್ ಪಾಟಿಲ್ ಮತ್ತು ವಿಶ್ವವಿದ್ಯಾನಿಲಯದ ಉಪಕುಲಪತಿಗಳು ಹಾಗೂ ಕುಲಸಚಿವರ ಸಮ್ಮುಖದಲ್ಲಿ ಪ್ರದಾನ ಮಾಡಿದರು.

ಎಸ್.ಡಿ.ಎಂ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ, ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಯು ನಮ್ಮ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮುಂದುವರಿಯುತ್ತಿದ್ದು ಅವರ ಶೈಕ್ಷಣಿಕ ವೆಚ್ಚವನ್ನು ಸಂಪೂರ್ಣ ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ಶೆಟ್ಟಿಯವರು ತಿಳಿಸಿರುತ್ತಾರೆ.

Related posts

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya
error: Content is protected !!