25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ದೊರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಸಮಾರೋಪ ಸಮಾರಂಭ ಮಾ2 ರಂದು ನಡೆಯಿತು.

ಪ್ರಸಿದ್ದ ವಾಗ್ಮಿ,ಲೇಖಕರು ಶ್ರೀಕಾಂತ್ ಶೆಟ್ಟಿ ತುಳುನಾಡಿನಲ್ಲಿ ದೈವರಾಧನೆಯ ಕುರಿತು ಉಪನ್ಯಾಸ ನೀಡಿದರು.

ಸನ್ಯಾಸಿ ಗುಳಿಗ ಕ್ಷೇತ್ರದ ಆಡಳಿತ ಮೊಕ್ತೇಸರ ವಿಶ್ವೇಶ್ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸುಮಾರು 600 ವರ್ಷಗಳ ಇತಿಹಾಸವಿದೆ. ಕಡ್ಲಗುಡ್ಡೆ ಎಂಬುದು ಹಿಂದಿನ ಹೆಸರು.1987 ನಂತರ ಈ ಕ್ಷೇತ್ರದಲ್ಲಿ ನಿರಂತರ ಆರಾಧನೆ ನಡೆಯುತ್ತ ಬರುತ್ತಿದೆ.2005 ರಲ್ಲಿ ಗುಳಿಗ ಪ್ರತಿಷ್ಠಾ ನಡೆಯಿತು.

ಪ್ರತಿವರ್ಷ ನಿರಂತರವಾಗಿ ಕ್ಷೇತ್ರದಲ್ಲಿ ಗಗ್ಗರ ಸೇವೆ ನಡಿತಾ ಬರುತ್ತಿದೆ. ಊರಿಗೆ ಬರುವ ಕಷ್ಟ ನಷ್ಟಗಳು ದೂರವಾಗಿ ನೆಮ್ಮದಿಯ ವಾತಾವರಣ ಸೃಷ್ಟಿಯಾಗಿದೆ.ಅರ್ಥಪೂರ್ಣ ಕಾರ್ಯಕ್ರಮ ಇಲ್ಲಿ ನಡೆದಿದೆ.ನಾಗಾರಾಧನೆ ಮತ್ತು ದೈವ- ದೇವರ ಆರಾಧನೆಯ ಅನುಗ್ರಹದಿಂದ ಈ ಕ್ಷೇತ್ರ ಬೆಳಗಿದೆ ಎಂದರು. ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಪ್ರಧಾನ‌ ಸಂಚಾಲಕ ಸಂಪತ್ ಬಿ ಸುವರ್ಣ ಸಮ್ಮೇಳನದ ನಿರ್ಣಯ ಮಂಡಿಸಿದರು.

ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಆಡಳಿತ ಮೊಕ್ತೇಸರ ವಿಶ್ವೇಶ್ ಕಿಣಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಪ್ರಧಾನ‌ ಸಂಚಾಲಕ ಸಂಪತ್ ಬಿ ಸುವರ್ಣ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಮಿತಿಗಳ ಸಂಚಾಲಕರನ್ನು ಗೌರವಿಸಲಾಯಿತು.

Related posts

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya
error: Content is protected !!