September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ 57 ವರ್ಷದ ಮಧುಸೂದನ್ ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು. ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಆಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಭೇಟಿ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya
error: Content is protected !!