23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

ಬೆಳ್ತಂಗಡಿ: ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ.ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಾ.1ರಂದು ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಪೂಜ್ಯ ಅಮರಕೀರ್ತಿ ಮುನಿಮಹಾರಾಜರು ಹಾಗೂ ಮೂಡಬಿದ್ರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಧ್ಯಕ್ಶತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಎಲ್ಲರೂ ಭಾವನೆಯಿಂದ ಬಾಹುಬಲಿ ಆಗಬೇಕು. ಮಸ್ತಕಾಭಿಷೇಕದ ಸವಿ ನೆನಪನ್ನು ಸದಾ ಸ್ಮರಿಸಿಕೊಂಡು ಸಾರ್ಥಕ ಹಾಗೂ ಪವಿತ್ರ ಜೀವನ ನಡೆಸಬೇಕು.

ಸಚಿವ ಡಿ.ಸುಧಾಕರ್ ಮತ್ತು ಪದ್ಮಪ್ರಸಾದ ಅಜಿಲ ಅವರನ್ನು ಗೌರವಿಸಲಾಯಿತು

ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧಕ್ಶ ಡಾ | ಪದ್ಮಪ್ರಸಾದ ಅಜಿಲ ಸ್ವಾಗತಿಸಿದರು, ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ ಧನ್ಯವಾದವಿತ್ತರು. ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಹಚ್ಚಾಡಿ ಶಾಲೆಯಲ್ಲಿ ರೂ. 1.75 ಲಕ್ಷದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya
error: Content is protected !!