22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಮಾ.1 ರಂದು ಮಂಗಳೂರು ಫಾದರ್ ಮುಲ್ಲರ್ಸ್ ಕಾಲೇಜು ಮತ್ತು ಮಂಗಳೂರು ರೋಶನಿ ನಿಲಯ ಸಮಾಜಕಾರ್ಯ ವಿಭಾಗದ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಫಾದರ್ ಮುಲ್ಲರ್ಸ್ ಕಾಲೇಜು ವೈದ್ಯರುಗಳಾದ ವಿಯೋನಾ ಮರಿಯನ್ ಡಿ’ಸೋಜ, ಲಕ್ಷ್ಮಿ ಎಸ್. ಕುನ್ನತ್ ಮತ್ತು ತಂಡದವರು ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 160 ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಮ್ಯಾನೇಜರ್ ಸಂದ್ಯಾ ಸುಭಾಷ್‌ರವರು, ರೋಶನಿ ನಿಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ನಾವರ ನಿವಾಸಿ ಸುಂದರಿ ನಿಧನ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!