July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯೆಯ ಜೊತೆಗೆ ಕೌಶಲ್ಯ ಇದ್ದಾಗ ಜೀವನದ ದಾರಿಯಲ್ಲಿ ಯಾವುದೇ ರೀತಿಯ ಆತಂಕಗಳು ಇರುವುದಿಲ್ಲ. ಮಹಿಳೆಯರು ಯಾವುದೇ ಹೆಚ್ಚಿನ ಬಂಡವಾಳವಿಲ್ಲದೆ ಸುಲಭವಾಗಿ ನಿರ್ವಹಿಸಬಹುದಾದ ಸ್ವಉದ್ಯೋಗವಾಗಿದೆ. ಇದರಿಂದ ಮಹಿಳೆಯರು ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ ಸಂಯೋಜಕ ಜಯಾನಂದ್‌ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್–ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಸಾರಿಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.

ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್‌ ಕೆ. ರವರು ಮಾತನಾಡಿ ಸ್ವಂತ ದುಡಿಮೆ ಮಾಡಲು ಹಲವಾರು ಅವಕಾಶಗಳಿದ್ದು, ತಮ್ಮ ಇಚ್ಛಾಶಕ್ತಿ, ಕೆಲಸದಲ್ಲಿ ಶ್ರದ್ಧೆ ಇದ್ದರೆ ಸ್ವಉದ್ಯೋಗವನ್ನು ನಡೆಸಬಹುದು ಎಂದರು.

ಈ ಸಂರ್ಭದಲ್ಲಿ ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಸೌಭಾಗ್ಯ ಆರ್.‌ ರವರು ಪ್ರಾತ್ಯಕ್ಷಿಕೆ ಮೂಲಕ ಕಲಿಸಿದರು. ತರಬೇತುದಾರರು ಶ್ರೀಮತಿ ಜಯಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya
error: Content is protected !!