July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಾಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ನಡೆದಿದೆ.

ಹಾವೇರಿ ಯಳಗಚ್ಚು ಗ್ರಾಮ, ಕರ್ಜಗಿ ಹೋಬಳಿ ನಿವಾಸಿ ಮಂಜಪ್ಪ ಬರಮಪ್ಪ ತೋಟಿಗೇರ್‌ (40) ಎಂಬವರ ದೂರಿನಂತೆ, ಮಂಜಪ್ಪ ಹಾಗೂ ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ಎಂಬವರು ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಮೈಪಾಳ ವೆಂಟೆಂಡ್‌ ಡ್ಯಾಮ್‌ ಬ್ರಿಡ್ಜ್‌ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕೆಲಸ ಮಾಡಿಕೊಂಡಿದ್ದು, ಮಾ.01 ರಂದು ಮದ್ಯಾಹ್ನ, ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ರವರು ನೀರಿನ ಟ್ಯಾಂಕರ್‌ ನಲ್ಲಿ ನೀರು ತುಂಬಿಸಿಕೊಂಡು, ಟ್ಯಾಂಕರ್‌ ನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಟ್ರಾಕ್ಟರ್‌ ಪಲ್ಟಿಯಾಗಿ ಚಾಲಕ ಸುರೇಶ್‌ ನು ಟ್ರಾಕ್ಟರ್ ನ ಅಡಿಯಲ್ಲಿ ಬಿದ್ದಿರುವುದಾಗಿದೆ. ಆಗ ಸ್ಥಳದಲ್ಲಿದ್ದವರು ಟ್ರಾಕ್ಟರ್‌ ನ್ನು ಆತನ ಮೇಲಿಂದ ಎತ್ತಿ ಬದಿಗೆ ನಿಲ್ಲಿಸಿ, ಆತನನ್ನು ಆರೈಕೆ ಮಾಡಲಾಗಿ, ಆತನ ತಲೆ ಜಜ್ಜಿ ಹೋಗಿ ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ: 15/2024 ಕಲಂ: 304 (A), ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!