September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಾಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ನಡೆದಿದೆ.

ಹಾವೇರಿ ಯಳಗಚ್ಚು ಗ್ರಾಮ, ಕರ್ಜಗಿ ಹೋಬಳಿ ನಿವಾಸಿ ಮಂಜಪ್ಪ ಬರಮಪ್ಪ ತೋಟಿಗೇರ್‌ (40) ಎಂಬವರ ದೂರಿನಂತೆ, ಮಂಜಪ್ಪ ಹಾಗೂ ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ಎಂಬವರು ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಮೈಪಾಳ ವೆಂಟೆಂಡ್‌ ಡ್ಯಾಮ್‌ ಬ್ರಿಡ್ಜ್‌ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕೆಲಸ ಮಾಡಿಕೊಂಡಿದ್ದು, ಮಾ.01 ರಂದು ಮದ್ಯಾಹ್ನ, ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ರವರು ನೀರಿನ ಟ್ಯಾಂಕರ್‌ ನಲ್ಲಿ ನೀರು ತುಂಬಿಸಿಕೊಂಡು, ಟ್ಯಾಂಕರ್‌ ನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಟ್ರಾಕ್ಟರ್‌ ಪಲ್ಟಿಯಾಗಿ ಚಾಲಕ ಸುರೇಶ್‌ ನು ಟ್ರಾಕ್ಟರ್ ನ ಅಡಿಯಲ್ಲಿ ಬಿದ್ದಿರುವುದಾಗಿದೆ. ಆಗ ಸ್ಥಳದಲ್ಲಿದ್ದವರು ಟ್ರಾಕ್ಟರ್‌ ನ್ನು ಆತನ ಮೇಲಿಂದ ಎತ್ತಿ ಬದಿಗೆ ನಿಲ್ಲಿಸಿ, ಆತನನ್ನು ಆರೈಕೆ ಮಾಡಲಾಗಿ, ಆತನ ತಲೆ ಜಜ್ಜಿ ಹೋಗಿ ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ: 15/2024 ಕಲಂ: 304 (A), ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!