July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಾಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ನಡೆದಿದೆ.

ಹಾವೇರಿ ಯಳಗಚ್ಚು ಗ್ರಾಮ, ಕರ್ಜಗಿ ಹೋಬಳಿ ನಿವಾಸಿ ಮಂಜಪ್ಪ ಬರಮಪ್ಪ ತೋಟಿಗೇರ್‌ (40) ಎಂಬವರ ದೂರಿನಂತೆ, ಮಂಜಪ್ಪ ಹಾಗೂ ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ಎಂಬವರು ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಮೈಪಾಳ ವೆಂಟೆಂಡ್‌ ಡ್ಯಾಮ್‌ ಬ್ರಿಡ್ಜ್‌ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕೆಲಸ ಮಾಡಿಕೊಂಡಿದ್ದು, ಮಾ.01 ರಂದು ಮದ್ಯಾಹ್ನ, ಮೃತ ಸುರೇಶ್‌ ಮಲ್ಲಪ್ಪ ಹೊಸಮನಿ ರವರು ನೀರಿನ ಟ್ಯಾಂಕರ್‌ ನಲ್ಲಿ ನೀರು ತುಂಬಿಸಿಕೊಂಡು, ಟ್ಯಾಂಕರ್‌ ನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಟ್ರಾಕ್ಟರ್‌ ಪಲ್ಟಿಯಾಗಿ ಚಾಲಕ ಸುರೇಶ್‌ ನು ಟ್ರಾಕ್ಟರ್ ನ ಅಡಿಯಲ್ಲಿ ಬಿದ್ದಿರುವುದಾಗಿದೆ. ಆಗ ಸ್ಥಳದಲ್ಲಿದ್ದವರು ಟ್ರಾಕ್ಟರ್‌ ನ್ನು ಆತನ ಮೇಲಿಂದ ಎತ್ತಿ ಬದಿಗೆ ನಿಲ್ಲಿಸಿ, ಆತನನ್ನು ಆರೈಕೆ ಮಾಡಲಾಗಿ, ಆತನ ತಲೆ ಜಜ್ಜಿ ಹೋಗಿ ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ: 15/2024 ಕಲಂ: 304 (A), ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!