July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

ಗುರುವಾಯನಕೆರೆ ಬಳಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ದೈವಕ್ಷೇತ್ರದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ನಡೆಯುತ್ತಿರುವ ತುಳುನಾಡ ದೈವಾರಾಧಕರ ಮಹಾ ಸಮಾವೇಶ ಪರ್ವ 2024 ರಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಶಾಸ್ತ್ರೀಯ, ಜಾನಪದೀಯ ನೃತ್ಯಗಳೊಂದಿಗೆ, ಹಾಡು , ನಾಟಕಗಳನ್ನು ಒಳಗೊಂಡ ಎಕ್ಸೆಲ್ ಕಲಾ ವೈಭವ ಪ್ರೇಕ್ಷಕರ ಮನ ಸೂರೆಗೊಂಡಿತು.


ಸಾಂಸ್ಕೃತಿಕ ಕಾರ್ಯಕ್ರಮಗಳ ಬಳಿಕ ವಿದ್ಯಾರ್ಥಿಗಳನ್ನು ಪರ್ವ 2024 ರ ಸಂಚಾಲಕರಾದ ಸಂಪತ್ ಬಿ ಸುವರ್ಣ ಮತ್ತು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾದ ವಿಶ್ವೇಶ ಕಿಣಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Related posts

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!