23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ದೊರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಸಮಾರೋಪ ಸಮಾರಂಭ ಮಾ2 ರಂದು ನಡೆಯಿತು.

ಪ್ರಸಿದ್ದ ವಾಗ್ಮಿ,ಲೇಖಕರು ಶ್ರೀಕಾಂತ್ ಶೆಟ್ಟಿ ತುಳುನಾಡಿನಲ್ಲಿ ದೈವರಾಧನೆಯ ಕುರಿತು ಉಪನ್ಯಾಸ ನೀಡಿದರು.

ಸನ್ಯಾಸಿ ಗುಳಿಗ ಕ್ಷೇತ್ರದ ಆಡಳಿತ ಮೊಕ್ತೇಸರ ವಿಶ್ವೇಶ್ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸುಮಾರು 600 ವರ್ಷಗಳ ಇತಿಹಾಸವಿದೆ. ಕಡ್ಲಗುಡ್ಡೆ ಎಂಬುದು ಹಿಂದಿನ ಹೆಸರು.1987 ನಂತರ ಈ ಕ್ಷೇತ್ರದಲ್ಲಿ ನಿರಂತರ ಆರಾಧನೆ ನಡೆಯುತ್ತ ಬರುತ್ತಿದೆ.2005 ರಲ್ಲಿ ಗುಳಿಗ ಪ್ರತಿಷ್ಠಾ ನಡೆಯಿತು.

ಪ್ರತಿವರ್ಷ ನಿರಂತರವಾಗಿ ಕ್ಷೇತ್ರದಲ್ಲಿ ಗಗ್ಗರ ಸೇವೆ ನಡಿತಾ ಬರುತ್ತಿದೆ. ಊರಿಗೆ ಬರುವ ಕಷ್ಟ ನಷ್ಟಗಳು ದೂರವಾಗಿ ನೆಮ್ಮದಿಯ ವಾತಾವರಣ ಸೃಷ್ಟಿಯಾಗಿದೆ.ಅರ್ಥಪೂರ್ಣ ಕಾರ್ಯಕ್ರಮ ಇಲ್ಲಿ ನಡೆದಿದೆ.ನಾಗಾರಾಧನೆ ಮತ್ತು ದೈವ- ದೇವರ ಆರಾಧನೆಯ ಅನುಗ್ರಹದಿಂದ ಈ ಕ್ಷೇತ್ರ ಬೆಳಗಿದೆ ಎಂದರು. ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಪ್ರಧಾನ‌ ಸಂಚಾಲಕ ಸಂಪತ್ ಬಿ ಸುವರ್ಣ ಸಮ್ಮೇಳನದ ನಿರ್ಣಯ ಮಂಡಿಸಿದರು.

ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಆಡಳಿತ ಮೊಕ್ತೇಸರ ವಿಶ್ವೇಶ್ ಕಿಣಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಪ್ರಧಾನ‌ ಸಂಚಾಲಕ ಸಂಪತ್ ಬಿ ಸುವರ್ಣ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಮಿತಿಗಳ ಸಂಚಾಲಕರನ್ನು ಗೌರವಿಸಲಾಯಿತು.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya
error: Content is protected !!