April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಮಾ.1 ರಂದು ಮಂಗಳೂರು ಫಾದರ್ ಮುಲ್ಲರ್ಸ್ ಕಾಲೇಜು ಮತ್ತು ಮಂಗಳೂರು ರೋಶನಿ ನಿಲಯ ಸಮಾಜಕಾರ್ಯ ವಿಭಾಗದ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಫಾದರ್ ಮುಲ್ಲರ್ಸ್ ಕಾಲೇಜು ವೈದ್ಯರುಗಳಾದ ವಿಯೋನಾ ಮರಿಯನ್ ಡಿ’ಸೋಜ, ಲಕ್ಷ್ಮಿ ಎಸ್. ಕುನ್ನತ್ ಮತ್ತು ತಂಡದವರು ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 160 ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಮ್ಯಾನೇಜರ್ ಸಂದ್ಯಾ ಸುಭಾಷ್‌ರವರು, ರೋಶನಿ ನಿಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!