ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

ಪುಂಜಾಲಕಟ್ಟೆ: ಇಲ್ಲಿಯ ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ ಪ್ರಕರಣ ಮಾ.2ರಂದು ವರದಿಯಾಗಿದೆ.

ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಇಲ್ಯಾಸ್‌ ಧೂಮಳಿಕೆ @ ಕುಂಟ ಇಲ್ಯಾಸ್‌ ಮತ್ತು ಇಲ್ಯಾಸ್‌ ಬಂಗೇರಕೆರೆ ಎಂಬವರುಗಳು, ಇಲ್ಯಾಸ್‌ ಧೂಮಳಿಕೆ ಎಂಬವರ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಉದಯರವಿ ವೈ.ಎಂ ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಆರೋಪಿಗಳು ಓಡಿ ತಪ್ಪಿಸಿಕೊಂಡಿದ್ದು,‌ಸ್ಥಳದಲ್ಲಿ ದೊರೆತ ಸುಮಾರು 60 ಕೆ.ಜಿ ಜಾನುವಾರು ಮಾಂಸ ಮತ್ತು ಇತರೆ ಅಂಗಾಗಗಳು, ಎಲೆಕ್ಟ್ರಿಕ್‌ ತೂಕದ ಯಂತ್ರ, ಮಾಂಸ ಮಾಡುವರೇ ಉಪಯೋಗಿಸುವ ಇತರೆ ವಸ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ದ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 16/2024 ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಜು.28: ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya
error: Content is protected !!