28 C
ಪುತ್ತೂರು, ಬೆಳ್ತಂಗಡಿ
August 5, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 15 ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದು, ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿಯ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ ಅವರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ನಾಮಪತ್ರ ಸಲ್ಲಿಸಲು ಮಾ.3ರಂದು ಅಂತಿಮ ದಿನವಾಗಿದ್ದು ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ
ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದೆ.

ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ ರಾಜಾರಾಮ ಭಟ್, ಪುತ್ತೂರಿನಿಂದ ಶಶಿಕುಮಾ‌ರ್ ರೈ ಬಾಲ್ಯೂಟ್ಟು, ಸುಳ್ಯದಿಂದ
ಎಸ್.ಎನ್ ಮನ್ಮಥ, ಮಂಗಳೂರಿನಿಂದ ಹಾಲಿ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾ‌ರ್, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ವಿನಯಕುಮಾ‌ರ್ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್‌ ಶೆಟ್ಟಿ, ಅಶೋಕ್ ರೈ, ಕುಂದಾಪುರದಿಂದ ರಾಜೀವ ಪೂಜಾರಿ, ಮಹೇಶ್‌ ಹೆಗ್ಡೆ, ಟಿಎಪಿಟಿಎಂಎಸ್‌ನಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಕ್ರೆಡಿಟ್ ಸಹಕಾರಿಯಿಂದ ಜಯರಾಜ್ ರೈ ನಾಮಪತ್ರ ಸಲ್ಲಿಸಿದ್ದು ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಬಾಕಿಯಿರುವ ಇತರ ಕ್ಷೇತ್ರಕ್ಕೆ ಹಾಲಿ ನಿರ್ದೇಶಕ ಪುತ್ತೂರಿನ ಎಸ್.ಬಿ ಜಯರಾಮ ರೈ ಹಾಗೂ ಬಂಟ್ವಾಳ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸ್ಥಾನಕ್ಕೆ ಚುನಾವಣೆ ನಡೆಯ ಬಹುದೇ ಅಥವಾ ಅವಿರೋಧ ಆಯ್ಕೆಯಾಗಬಹುದೇ ಎಂದು ಕಾದು ನೋಡಬೇಕಿದೆ.

Related posts

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya
error: Content is protected !!