30.6 C
ಪುತ್ತೂರು, ಬೆಳ್ತಂಗಡಿ
June 21, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 15 ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದು, ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿಯ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ ಅವರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ನಾಮಪತ್ರ ಸಲ್ಲಿಸಲು ಮಾ.3ರಂದು ಅಂತಿಮ ದಿನವಾಗಿದ್ದು ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ
ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದೆ.

ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ ರಾಜಾರಾಮ ಭಟ್, ಪುತ್ತೂರಿನಿಂದ ಶಶಿಕುಮಾ‌ರ್ ರೈ ಬಾಲ್ಯೂಟ್ಟು, ಸುಳ್ಯದಿಂದ
ಎಸ್.ಎನ್ ಮನ್ಮಥ, ಮಂಗಳೂರಿನಿಂದ ಹಾಲಿ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾ‌ರ್, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ವಿನಯಕುಮಾ‌ರ್ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್‌ ಶೆಟ್ಟಿ, ಅಶೋಕ್ ರೈ, ಕುಂದಾಪುರದಿಂದ ರಾಜೀವ ಪೂಜಾರಿ, ಮಹೇಶ್‌ ಹೆಗ್ಡೆ, ಟಿಎಪಿಟಿಎಂಎಸ್‌ನಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಕ್ರೆಡಿಟ್ ಸಹಕಾರಿಯಿಂದ ಜಯರಾಜ್ ರೈ ನಾಮಪತ್ರ ಸಲ್ಲಿಸಿದ್ದು ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಬಾಕಿಯಿರುವ ಇತರ ಕ್ಷೇತ್ರಕ್ಕೆ ಹಾಲಿ ನಿರ್ದೇಶಕ ಪುತ್ತೂರಿನ ಎಸ್.ಬಿ ಜಯರಾಮ ರೈ ಹಾಗೂ ಬಂಟ್ವಾಳ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸ್ಥಾನಕ್ಕೆ ಚುನಾವಣೆ ನಡೆಯ ಬಹುದೇ ಅಥವಾ ಅವಿರೋಧ ಆಯ್ಕೆಯಾಗಬಹುದೇ ಎಂದು ಕಾದು ನೋಡಬೇಕಿದೆ.

Related posts

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!