May 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 15 ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದು, ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿಯ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ ಅವರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ನಾಮಪತ್ರ ಸಲ್ಲಿಸಲು ಮಾ.3ರಂದು ಅಂತಿಮ ದಿನವಾಗಿದ್ದು ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ
ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದೆ.

ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ ರಾಜಾರಾಮ ಭಟ್, ಪುತ್ತೂರಿನಿಂದ ಶಶಿಕುಮಾ‌ರ್ ರೈ ಬಾಲ್ಯೂಟ್ಟು, ಸುಳ್ಯದಿಂದ
ಎಸ್.ಎನ್ ಮನ್ಮಥ, ಮಂಗಳೂರಿನಿಂದ ಹಾಲಿ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾ‌ರ್, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ವಿನಯಕುಮಾ‌ರ್ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್‌ ಶೆಟ್ಟಿ, ಅಶೋಕ್ ರೈ, ಕುಂದಾಪುರದಿಂದ ರಾಜೀವ ಪೂಜಾರಿ, ಮಹೇಶ್‌ ಹೆಗ್ಡೆ, ಟಿಎಪಿಟಿಎಂಎಸ್‌ನಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಕ್ರೆಡಿಟ್ ಸಹಕಾರಿಯಿಂದ ಜಯರಾಜ್ ರೈ ನಾಮಪತ್ರ ಸಲ್ಲಿಸಿದ್ದು ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಬಾಕಿಯಿರುವ ಇತರ ಕ್ಷೇತ್ರಕ್ಕೆ ಹಾಲಿ ನಿರ್ದೇಶಕ ಪುತ್ತೂರಿನ ಎಸ್.ಬಿ ಜಯರಾಮ ರೈ ಹಾಗೂ ಬಂಟ್ವಾಳ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸ್ಥಾನಕ್ಕೆ ಚುನಾವಣೆ ನಡೆಯ ಬಹುದೇ ಅಥವಾ ಅವಿರೋಧ ಆಯ್ಕೆಯಾಗಬಹುದೇ ಎಂದು ಕಾದು ನೋಡಬೇಕಿದೆ.

Related posts

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!