23.7 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

ಪುಂಜಾಲಕಟ್ಟೆ: ಇಲ್ಲಿಯ ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ ಪ್ರಕರಣ ಮಾ.2ರಂದು ವರದಿಯಾಗಿದೆ.

ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಇಲ್ಯಾಸ್‌ ಧೂಮಳಿಕೆ @ ಕುಂಟ ಇಲ್ಯಾಸ್‌ ಮತ್ತು ಇಲ್ಯಾಸ್‌ ಬಂಗೇರಕೆರೆ ಎಂಬವರುಗಳು, ಇಲ್ಯಾಸ್‌ ಧೂಮಳಿಕೆ ಎಂಬವರ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಉದಯರವಿ ವೈ.ಎಂ ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಆರೋಪಿಗಳು ಓಡಿ ತಪ್ಪಿಸಿಕೊಂಡಿದ್ದು,‌ಸ್ಥಳದಲ್ಲಿ ದೊರೆತ ಸುಮಾರು 60 ಕೆ.ಜಿ ಜಾನುವಾರು ಮಾಂಸ ಮತ್ತು ಇತರೆ ಅಂಗಾಗಗಳು, ಎಲೆಕ್ಟ್ರಿಕ್‌ ತೂಕದ ಯಂತ್ರ, ಮಾಂಸ ಮಾಡುವರೇ ಉಪಯೋಗಿಸುವ ಇತರೆ ವಸ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ದ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 16/2024 ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!