September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

ಪುಂಜಾಲಕಟ್ಟೆ: ಇಲ್ಲಿಯ ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ ಪ್ರಕರಣ ಮಾ.2ರಂದು ವರದಿಯಾಗಿದೆ.

ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಇಲ್ಯಾಸ್‌ ಧೂಮಳಿಕೆ @ ಕುಂಟ ಇಲ್ಯಾಸ್‌ ಮತ್ತು ಇಲ್ಯಾಸ್‌ ಬಂಗೇರಕೆರೆ ಎಂಬವರುಗಳು, ಇಲ್ಯಾಸ್‌ ಧೂಮಳಿಕೆ ಎಂಬವರ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಉದಯರವಿ ವೈ.ಎಂ ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಆರೋಪಿಗಳು ಓಡಿ ತಪ್ಪಿಸಿಕೊಂಡಿದ್ದು,‌ಸ್ಥಳದಲ್ಲಿ ದೊರೆತ ಸುಮಾರು 60 ಕೆ.ಜಿ ಜಾನುವಾರು ಮಾಂಸ ಮತ್ತು ಇತರೆ ಅಂಗಾಗಗಳು, ಎಲೆಕ್ಟ್ರಿಕ್‌ ತೂಕದ ಯಂತ್ರ, ಮಾಂಸ ಮಾಡುವರೇ ಉಪಯೋಗಿಸುವ ಇತರೆ ವಸ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ದ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 16/2024 ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ವಾರೀಸುದಾರರ ಪತ್ತೆಗೆ ಮನವಿ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya
error: Content is protected !!