July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

ಪುಂಜಾಲಕಟ್ಟೆ: ಇಲ್ಲಿಯ ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ ಪ್ರಕರಣ ಮಾ.2ರಂದು ವರದಿಯಾಗಿದೆ.

ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಇಲ್ಯಾಸ್‌ ಧೂಮಳಿಕೆ @ ಕುಂಟ ಇಲ್ಯಾಸ್‌ ಮತ್ತು ಇಲ್ಯಾಸ್‌ ಬಂಗೇರಕೆರೆ ಎಂಬವರುಗಳು, ಇಲ್ಯಾಸ್‌ ಧೂಮಳಿಕೆ ಎಂಬವರ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಉದಯರವಿ ವೈ.ಎಂ ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಆರೋಪಿಗಳು ಓಡಿ ತಪ್ಪಿಸಿಕೊಂಡಿದ್ದು,‌ಸ್ಥಳದಲ್ಲಿ ದೊರೆತ ಸುಮಾರು 60 ಕೆ.ಜಿ ಜಾನುವಾರು ಮಾಂಸ ಮತ್ತು ಇತರೆ ಅಂಗಾಗಗಳು, ಎಲೆಕ್ಟ್ರಿಕ್‌ ತೂಕದ ಯಂತ್ರ, ಮಾಂಸ ಮಾಡುವರೇ ಉಪಯೋಗಿಸುವ ಇತರೆ ವಸ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ದ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 16/2024 ಕಲಂ: 4, 12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!