28 C
ಪುತ್ತೂರು, ಬೆಳ್ತಂಗಡಿ
August 5, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

ಪುದುವೆಟ್ಟು: ಕಾಡುಕೋಣವೊಂದು ರಿಕ್ಷಾ ಮೇಲೆ ದಾಳಿ ನಡೆಸಿ ಬಾಲಕ ಗಾಯಗೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.

ಧರ್ಮಸ್ಥಳ-ಮುಂಡಾಜೆ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಪುದುವೆಟ್ಟು ಗ್ರಾಮದ ದಡಪಿತ್ತಿಲು ಎಂಬಲ್ಲಿ ಮಾರ್ಚ್ 2 ರಂದು ರಾತ್ರಿ ಸುಮಾರು ಗಂಟೆ 8:30 ಗಂಟೆಗೆ ಧರ್ಮಸ್ಥಳದಿಂದ ಬೊಮ್ಮನಾರು ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕರಾದ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ವಡೆಕ್ಕೆಲ್,ಬೊಲ್ಮನಾರು ನಿವಾಸಿ ಡೆನ್ನಿಸ್ (42) ಮತ್ತು ಮಗ ದಿಲ್ಸನ್(15) ಎಂಬವರು ಹೋಗುವಾಗ ಆಟೋ ರಿಕ್ಷಾದ ಮೇಲೆ ಕಾಡುಕೋಣವೊಂದು ದಾಳಿ ಮಾಡಿ ಪಲ್ಟಿ ಮಾಡಿ ಜಖಂ ಮಾಡಿದೆ.ಈ ಘಟನೆ ವೇಳೆ ಆಟೋದಲ್ಲಿದ್ದ ದಿಲ್ಸನ್(15) ಎಂಬುವರಿಗೆ ತಲೆಗೆ ಗಾಯವಾಗಿದ್ದು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!