
ಬೆಳ್ತಂಗಡಿ: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮಾ.3ರಂದು ಬಿಡುಗಡೆಗೊಳಿಸಿದರು.
ಮಾ.20 ರಿಂದ ಮಾ 28ರ ವರಗೆ ನಡೆಯುವ ಬ್ರಹ್ಮಕಲಶೋತ್ಸವ ನಡೆಯಲಿದ್ದು. 9 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ದೇವಸ್ಥಾನದ ಆಡಳಿತ ಸಮಿತಿ, ಮಕ್ಕಳ ಸಮಿತಿ ಬಗ್ಗೆ ಖಾವಂದರಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.ಕೆ.ಧನಂಜಯ್ ರಾವ್ ಚರ್ಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.ಕೆ ಧನಂಜಯ್ ರಾವ್, ಕಾರ್ಯದರ್ಶಿ ದಾಸಪ್ಪ ಗೌಡ, ದಿನೇಶ್ ಗೌಡ ದಿಡುಪೆ, ಮಹಿಳಾ ಸಮಿತಿಯ ಜ್ಯೋತಿ ವಿಠಲ ಗೌಡ ಕಿಲ್ಲೂರು, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.













