May 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 15 ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದು, ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿಯ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ ಅವರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ನಾಮಪತ್ರ ಸಲ್ಲಿಸಲು ಮಾ.3ರಂದು ಅಂತಿಮ ದಿನವಾಗಿದ್ದು ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ
ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದೆ.

ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ ರಾಜಾರಾಮ ಭಟ್, ಪುತ್ತೂರಿನಿಂದ ಶಶಿಕುಮಾ‌ರ್ ರೈ ಬಾಲ್ಯೂಟ್ಟು, ಸುಳ್ಯದಿಂದ
ಎಸ್.ಎನ್ ಮನ್ಮಥ, ಮಂಗಳೂರಿನಿಂದ ಹಾಲಿ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾ‌ರ್, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ವಿನಯಕುಮಾ‌ರ್ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್‌ ಶೆಟ್ಟಿ, ಅಶೋಕ್ ರೈ, ಕುಂದಾಪುರದಿಂದ ರಾಜೀವ ಪೂಜಾರಿ, ಮಹೇಶ್‌ ಹೆಗ್ಡೆ, ಟಿಎಪಿಟಿಎಂಎಸ್‌ನಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಕ್ರೆಡಿಟ್ ಸಹಕಾರಿಯಿಂದ ಜಯರಾಜ್ ರೈ ನಾಮಪತ್ರ ಸಲ್ಲಿಸಿದ್ದು ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಬಾಕಿಯಿರುವ ಇತರ ಕ್ಷೇತ್ರಕ್ಕೆ ಹಾಲಿ ನಿರ್ದೇಶಕ ಪುತ್ತೂರಿನ ಎಸ್.ಬಿ ಜಯರಾಮ ರೈ ಹಾಗೂ ಬಂಟ್ವಾಳ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸ್ಥಾನಕ್ಕೆ ಚುನಾವಣೆ ನಡೆಯ ಬಹುದೇ ಅಥವಾ ಅವಿರೋಧ ಆಯ್ಕೆಯಾಗಬಹುದೇ ಎಂದು ಕಾದು ನೋಡಬೇಕಿದೆ.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya
error: Content is protected !!