28 C
ಪುತ್ತೂರು, ಬೆಳ್ತಂಗಡಿ
August 5, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 15 ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದು, ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿಯ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ ಅವರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ನಾಮಪತ್ರ ಸಲ್ಲಿಸಲು ಮಾ.3ರಂದು ಅಂತಿಮ ದಿನವಾಗಿದ್ದು ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ
ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದೆ.

ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ ರಾಜಾರಾಮ ಭಟ್, ಪುತ್ತೂರಿನಿಂದ ಶಶಿಕುಮಾ‌ರ್ ರೈ ಬಾಲ್ಯೂಟ್ಟು, ಸುಳ್ಯದಿಂದ
ಎಸ್.ಎನ್ ಮನ್ಮಥ, ಮಂಗಳೂರಿನಿಂದ ಹಾಲಿ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾ‌ರ್, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ವಿನಯಕುಮಾ‌ರ್ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್‌ ಶೆಟ್ಟಿ, ಅಶೋಕ್ ರೈ, ಕುಂದಾಪುರದಿಂದ ರಾಜೀವ ಪೂಜಾರಿ, ಮಹೇಶ್‌ ಹೆಗ್ಡೆ, ಟಿಎಪಿಟಿಎಂಎಸ್‌ನಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಕ್ರೆಡಿಟ್ ಸಹಕಾರಿಯಿಂದ ಜಯರಾಜ್ ರೈ ನಾಮಪತ್ರ ಸಲ್ಲಿಸಿದ್ದು ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಬಾಕಿಯಿರುವ ಇತರ ಕ್ಷೇತ್ರಕ್ಕೆ ಹಾಲಿ ನಿರ್ದೇಶಕ ಪುತ್ತೂರಿನ ಎಸ್.ಬಿ ಜಯರಾಮ ರೈ ಹಾಗೂ ಬಂಟ್ವಾಳ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸ್ಥಾನಕ್ಕೆ ಚುನಾವಣೆ ನಡೆಯ ಬಹುದೇ ಅಥವಾ ಅವಿರೋಧ ಆಯ್ಕೆಯಾಗಬಹುದೇ ಎಂದು ಕಾದು ನೋಡಬೇಕಿದೆ.

Related posts

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!