28 C
ಪುತ್ತೂರು, ಬೆಳ್ತಂಗಡಿ
August 5, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

ಪುದುವೆಟ್ಟು: ಕಾಡುಕೋಣವೊಂದು ರಿಕ್ಷಾ ಮೇಲೆ ದಾಳಿ ನಡೆಸಿ ಬಾಲಕ ಗಾಯಗೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.

ಧರ್ಮಸ್ಥಳ-ಮುಂಡಾಜೆ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಪುದುವೆಟ್ಟು ಗ್ರಾಮದ ದಡಪಿತ್ತಿಲು ಎಂಬಲ್ಲಿ ಮಾರ್ಚ್ 2 ರಂದು ರಾತ್ರಿ ಸುಮಾರು ಗಂಟೆ 8:30 ಗಂಟೆಗೆ ಧರ್ಮಸ್ಥಳದಿಂದ ಬೊಮ್ಮನಾರು ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕರಾದ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ವಡೆಕ್ಕೆಲ್,ಬೊಲ್ಮನಾರು ನಿವಾಸಿ ಡೆನ್ನಿಸ್ (42) ಮತ್ತು ಮಗ ದಿಲ್ಸನ್(15) ಎಂಬವರು ಹೋಗುವಾಗ ಆಟೋ ರಿಕ್ಷಾದ ಮೇಲೆ ಕಾಡುಕೋಣವೊಂದು ದಾಳಿ ಮಾಡಿ ಪಲ್ಟಿ ಮಾಡಿ ಜಖಂ ಮಾಡಿದೆ.ಈ ಘಟನೆ ವೇಳೆ ಆಟೋದಲ್ಲಿದ್ದ ದಿಲ್ಸನ್(15) ಎಂಬುವರಿಗೆ ತಲೆಗೆ ಗಾಯವಾಗಿದ್ದು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya
error: Content is protected !!