24 C
ಪುತ್ತೂರು, ಬೆಳ್ತಂಗಡಿ
June 21, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

ಪುದುವೆಟ್ಟು: ಕಾಡುಕೋಣವೊಂದು ರಿಕ್ಷಾ ಮೇಲೆ ದಾಳಿ ನಡೆಸಿ ಬಾಲಕ ಗಾಯಗೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.

ಧರ್ಮಸ್ಥಳ-ಮುಂಡಾಜೆ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಪುದುವೆಟ್ಟು ಗ್ರಾಮದ ದಡಪಿತ್ತಿಲು ಎಂಬಲ್ಲಿ ಮಾರ್ಚ್ 2 ರಂದು ರಾತ್ರಿ ಸುಮಾರು ಗಂಟೆ 8:30 ಗಂಟೆಗೆ ಧರ್ಮಸ್ಥಳದಿಂದ ಬೊಮ್ಮನಾರು ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕರಾದ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ವಡೆಕ್ಕೆಲ್,ಬೊಲ್ಮನಾರು ನಿವಾಸಿ ಡೆನ್ನಿಸ್ (42) ಮತ್ತು ಮಗ ದಿಲ್ಸನ್(15) ಎಂಬವರು ಹೋಗುವಾಗ ಆಟೋ ರಿಕ್ಷಾದ ಮೇಲೆ ಕಾಡುಕೋಣವೊಂದು ದಾಳಿ ಮಾಡಿ ಪಲ್ಟಿ ಮಾಡಿ ಜಖಂ ಮಾಡಿದೆ.ಈ ಘಟನೆ ವೇಳೆ ಆಟೋದಲ್ಲಿದ್ದ ದಿಲ್ಸನ್(15) ಎಂಬುವರಿಗೆ ತಲೆಗೆ ಗಾಯವಾಗಿದ್ದು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya
error: Content is protected !!