23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ ಅಗತ್ಯತೆಗೆ ಪೂರಕವಾಗಿ ಆರ್ಥಿಕ ಸಹಕಾರವನ್ನು ಈ ದಿನ ಹಸ್ತಾಂತರ ಮಾಡಲಾಯಿತು ಹಾಗೂ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ಸ್ಪರ್ಧಾ ಕಾರ್ಯಕ್ರಮಗಳ ಬಹುಮಾನ ವಿತರಣೆ ಮಾಡಲಾಯಿತು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ ಕೊಡಂಗೆ ರವರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಹಸ್ತಾಂತರಿಸಿದರು. ಸಂಘಟನೆಯ ಸಲಹೆಗಾರರಾದ ಉಮೇಶ್ ಸುವರ್ಣ ರವರು ಬಹುಮಾನ ವಿತರಿಸಿದರು

ಸಭೆಯಲ್ಲಿ ಟೀಂ ಅಭಯಹಸ್ತ ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ ,ಮುಖ್ಯಶಿಕ್ಷಕರಾದ ನಾಗಭೂಷಣ್, ಶಿಕ್ಷಕರಾದ ಸುಬ್ರಹ್ಮಣ್ಯ ಭಟ್, ಶ್ರೀಮತಿ ಶಾಂತಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya
error: Content is protected !!