24.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆಯು ಮಾ.4 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯಿಂದ ತಾಲೂಕು ಮಿನಿ ವಿಧಾನ ಸೌಧದವರೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಂಎಲ್ಸಿ ಪ್ರತಾಪ್ ಸಿಂಹ ಮಾತನಾಡಿ ಬೆಂಗಳೂರಿನ ವಿಧಾನ ಸೌಧ ಇಡೀ ಕರ್ನಾಟಕದ ಶಕ್ತಿಕೇಂದ್ರ, ಇಲ್ಲಿ ಚುನಾವಣೆ ಆಯ್ತು ಎಂಬ ಕಾರಣಕ್ಕೋಸ್ಕರ, ರಾಜ್ಯ ಸಭಾ ಸದ್ಯರಾಗಿ ನಾಸಿರ್ ಉಸೇನ್ ಗೆದ್ರು ಎಂಬ ಕಾರಣವನ್ನು ಮುಂದಾಗಿ ಇಟ್ಟುಕೊಂಡು ಪಾಕಿಸ್ತಾನ ಪರವಾದಂತಹ ಘೋಷಣೆಯನ್ನು ಹಾಕುತ್ತಾರೆ ಎಂದಾದರೆ ಇದು ಕಾಂಗ್ರೆಸ್ ನ ಮಾನಸಿಕತೆಯನ್ನು ತೋರಿಸುತ್ತದೆ. ರಾಷ್ಟ್ರ ಮೊದಲು ಎನ್ನುವಂತಹ ಭಾವನೆ ಅವರಲ್ಲಿ ಇದ್ರೆ ತಕ್ಷಣ ಅವರನ್ನು ಬಂಧಿಸುವಂತಹ ಕೆಲಸ ಮಾಡ್ತಾ ಇದ್ರು. ನಿಮಗೆ ಅದರ ತನಿಖೆ ಮಾಡುವುದಕ್ಕೆ ಧೈರ್ಯ ಸಾಕಾಗುವುದಿಲ್ಲ ಎಂದದಾರೆ ಎನ್ಐಎ ಗೆ ಕೊಡಿ. ಜನರಿಗೆ ವಿಶ್ವಾಸ ಬರುವಂತಹ ರೀತಿಯಲ್ಲಿ ದೇಶ ದ್ರೋಹಿಗಳನ್ನು ನಾವು ಒಳಗಟ್ಟುತ್ತೇವೆ ಎಂಬ ಸಂದೇಶ ನೀಡಿ ಎಂದು ಆಗ್ರಹಿಸಿದರು.

ಬೆಳ್ತಂಗಡಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಮಾತನಾಡಿ ಡಿಜೆ ಹಳ್ಳಿ ಕೆಜೆ ಹಳ್ಳಿಯಲ್ಲಿ ನಡೆದ ಘಟನೆಗಳನ್ನು ನಾವು ನೋಡಿರಬಹುದು, ಅವತ್ತಿನಿಂದ ಇವತ್ತಿನವರೆಗೂ ಹಲವಾರು ಘಟನೆಗಳು ನಡೆದಾಗಳು ವೋಟ್ ಬ್ಯಾಂಕ್ ಎನ್ನುವಂತಹ ಒಂದೇ ಒಂದು ಕಾರಣಕ್ಕಾಗಿ ಕಾಂಗ್ರೆಸ್ ನ ನಾಯಕರು ಯಾವುದೇ ಕಾರಣಕ್ಕೂ ಮತಾಂದರನ್ನು ಬೆಂಬಲಿಸುತ್ತ ಬಂದಿದ್ದಾರೆಯೇ ಹೊರತು ಯಾವುದೇ ಕಾರಣಕ್ಕೂ ವಿರೋಧ ಮಾಡಿಲ್ಲ ಆ ಕಾರಣಕ್ಕಾಗಿ ನಾವು ಇಂದು ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಯಾತ್ರೆಯನ್ನು ಮಾಡಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಂಡಲದ ನೂತನ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಪ್ರಧಾನ ಕಾರ್ಯದರ್ಶಿ ಜಯಾನಂದ್, ಪ್ರಶಾಂತ್ ಪಾರೆಂಕಿ, ಜಿಲ್ಲಾ ಉಪಾಧ್ಯಕ್ಷ ಪ್ರಮೋದ್, ಉಮೇಶ್ ಕುಲಾಲ್, ಬೆಳ್ತಂಗಡಿ ಯುವ ಮೋರ್ಚಾದ ಉಪಾಧ್ಯಕ್ಷರಾದ ಪ್ರಶಾಂತ್ ಗೌಡ, ಗಣೇಶ್ ಲಾಯಿಲ, ಪ್ರಕಾಶ್ ಪೂಜಾರಿ, ಪದ್ಮನಾಭ ಕುಲಾಲ್, ಸುಜಿತ್ ಪೆರಾಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿನೀತ್ ಕೋಟ್ಯಾನ್, ಜಯಪ್ರಸಾದ್ ಗೌಡ, ಕಾರ್ಯದರ್ಶಿಯಾಗಿ ಸುಧೀರ್ ಪೂಜಾರಿ ಚಾರ್ಮಾಡಿ, ಹರೀಶ್ ಗೌಡ ಸಂಭೂಳ್ಯ, ಗಿರೀಶ್ ಗೌಡ ಬಿ.ಕೆ ಬಂದಾರು, ರಂಜು ಕೊಕ್ಕಡ, ಕೋಶಾಧಿಕಾರಿಯಾಗಿ ಸ್ವಸ್ತಿಕ್ ಗೌಡ ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಅವಿನಾಶ್ ಹೊಸಂಗಡಿ, ಅಶ್ವಿನ್ ಅಂಡಿಂಜೆ. ಪ್ರಸಾದ್ ಸುದೇಮುಗೇರು, ಮನೋಹರ ಪೂಜಾರಿ ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಪವನ್ ಬಂಗೇರ, ಪ್ರದೀಪ್ ಕುಲಾಲ್ ಕಾಯರ್ತ್ತಡ್ಕ, ರಾಮೇಶ್ವರ ಆಚಾರ್ಯ ಕುತ್ಲುರು, ಉದಯ ಬಂಗೇರ ನಾವೂರು, ಪವನ್ ಶೆಟ್ಟಿ ಉಜಿರೆ, ಸಂಕೇತ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya
error: Content is protected !!