ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯದ್ಯಕ್ಷೆ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಮುಖಂಡೆ ಶ್ರೀಮತಿ ವಸಂತ ಮುರುಳಿ ಆಚಾರ್ಯ ಬೆಂಗಳೂರು ಹಾಗೂ ಉಪಾದ್ಯಕ್ಷೆ ಶ್ರೀಮತಿ ಆಶಾ ಗುರೂಜಿ ಉಮೇಶ್ ಆಚಾರ್ಯರವರು ಮಾ.4ರಂದು ಧರ್ಮಸ್ಥಳಕ್ಕೆ ಆಗಮಿಸಿ, ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

ನಂತರ ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರೂ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಗೇರುಕಟ್ಟೆಯ ಕೊರಂಜ ದಿವಾಕರ ಆಚಾರ್ಯರವರ ಮನೆಗೆ ಆಗಮಿಸಿ, ಆಶೀರ್ವಾದ ಪಡೆದರು.

ಇವರ ಜೊತೆ ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಭುವನೇಶ್ ಜಿ, ವೆನ್ಲಾಕ್ ಜಿಲ್ಲಾಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ,ನಾಳ ಶ್ರೀದುರ್ಗಾ ಪರಮೇಶ್ವರಿ ಯಕ್ಷಗಾನ ಮಂಡಳಿಯ ಪ್ರಬಂಧಕ ರಾಘವ ಎಚ್, ಪತ್ರಕರ್ತರಾದ ಕೆ.ಎನ್.ಗೌಡ,ಸತೀಶ್ ನಾಯ್ಕ್ ನಾಳ,ನಾಳ ದೇವಸ್ಥಾನದ ಮ್ಯಾನೇಜರ್ ಗಿರೀಶ್ ಶೆಟ್ಟಿ, ಉದ್ಯಮಿಗಳಾದ ಯೋಗಿಶ್ ಎಸ್.ಆರ್.ಹಾಜರಿದ್ದರು.

Leave a Comment

error: Content is protected !!