25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ ಅಗತ್ಯತೆಗೆ ಪೂರಕವಾಗಿ ಆರ್ಥಿಕ ಸಹಕಾರವನ್ನು ಈ ದಿನ ಹಸ್ತಾಂತರ ಮಾಡಲಾಯಿತು ಹಾಗೂ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ಸ್ಪರ್ಧಾ ಕಾರ್ಯಕ್ರಮಗಳ ಬಹುಮಾನ ವಿತರಣೆ ಮಾಡಲಾಯಿತು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ ಕೊಡಂಗೆ ರವರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಹಸ್ತಾಂತರಿಸಿದರು. ಸಂಘಟನೆಯ ಸಲಹೆಗಾರರಾದ ಉಮೇಶ್ ಸುವರ್ಣ ರವರು ಬಹುಮಾನ ವಿತರಿಸಿದರು

ಸಭೆಯಲ್ಲಿ ಟೀಂ ಅಭಯಹಸ್ತ ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ ,ಮುಖ್ಯಶಿಕ್ಷಕರಾದ ನಾಗಭೂಷಣ್, ಶಿಕ್ಷಕರಾದ ಸುಬ್ರಹ್ಮಣ್ಯ ಭಟ್, ಶ್ರೀಮತಿ ಶಾಂತಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!