26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಸುಲ್ಕೇರಿ : ಸುಲ್ಕೇರಿ ಗ್ರಾಮ ಪಂಚಾಯತ್ ನಲ್ಲಿ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವು ಮಾ.4ರಂದು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಚಂದ್ರಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.


ಸಂಪನ್ಮೂಲ ವ್ಯಕ್ತಿಗಳಾಗಿ ಸಿ. ಪಿ..ಸಿ.ಆರ್.ಐ ವಿಟ್ಲ ಇಲ್ಲಿನ ವಿಜ್ಞಾನಿಗಳಾದ ಡಾ. ಭವಿಷ್ಯ ಇವರು ಮಾಹಿತಿ ನೀಡಿದರು.
ಉಪಾಧ್ಯಕ್ಷರಾದ ಶುಭಕರ್ ಪೂಜಾರಿ, ಸದಸ್ಯರಾದ ರವಿ ಪೂಜಾರಿ, ನಾರಾಯಣ ಪೂಜಾರಿ, ಶ್ರೀಮತಿ ಯಶೋದಾ ಬಂಗೇರ , ಶ್ರೀಮತಿ ಪ್ರೇಮಾ, ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ, ತೋಟಗಾರಿಕಾ ಅಧಿಕಾರಿಗಳಾದ ಭೀಮ್ ರಾಯ್, ಮಹಾವೀರ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಸ್ವಾಗತಿಸಿ, ವಂದಿಸಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡರು. ಎಲೆಚುಕ್ಕೆ ರೋಗದ ಔಷಧ ವಿತರಿಸಲಾಯಿತು.

Related posts

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya
error: Content is protected !!