23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

ಇಳಂತಿಲ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆಯ 2023-2024 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ಮಾ.04 ರಂದು ಇಳಂತಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಜೋಸೆಫ್ ಪಿ ಎಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವಿಶೇಷ ಗ್ರಾಮ ಸಭೆಯಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮಿ ಹಾಗೂ ಸಾಮಾಜಿಕ ಪರಿಶೋಧನಾ ತಂಡದ ಸದಸ್ಯರು, ತಾಲೂಕು ಪಂಚಾಯತ್ ನರೇಗಾ ಇಂಜಿನೀಯರ್ ಎಂ ಶರಣ್ ರೈ, ಪಂ.ರಾಜ್ ಕಿರಿಯ ಇಂಜಿನೀಯರ್ ಗಫೂರ್ ಸಾಬ್, ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ಸವಿತಾ ಹೆಚ್, ಸದಸ್ಯರಾದ ಚಂದ್ರಿಕಾ ಭಟ್ ಹಾಗೂ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ವಿಜಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸಂಜೀವ ನಾಯ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya
error: Content is protected !!