22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

ಬೆಳ್ತಂಗಡಿ : ನೆರಿಯ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರಿಗೆ ಸಮಾಜ ಸೇವೆಗಾಗಿ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ 2023-24 ” ಕೇರಳದ ಕಣ್ಣೂರಿನಲ್ಲಿ ಮಾ.2 ರಂದು ಲಭಿಸಿದೆ.

ಸಿಯೋನ್ ಆಶ್ರಮ ಕಳೆದ 25 ವರ್ಷಗಳಿಂದ ಸಮಾಜದಲ್ಲಿ ಅಸಹಾಯಕತೆಯಿಂದ ಬೀದಿಪಾಲಾಗಿದ್ದ ಮನೋರೋಗಿಗಳು, ಬುದ್ಧಿಮಾಂದ್ಯರು, ಅಂಗವಿಕಲರು, ನಿರ್ಗತಿಕರು ಮತ್ತು ವಿಶೇಷ ಚೇತನ ಮಕ್ಕಳು, ವೃದ್ಧರು, ವಿಧವೆಯರು, ವಿವಿಧ ರೀತಿಯಲ್ಲಿ ದೌರ್ಜನ್ಯಕ್ಕೊಳಪಟ್ಟವರು, ಬಟ್ಟೆಬರೆಯಿಲ್ಲದೆ ಬೀದಿಯಲ್ಲಿ ತಿರುಗುತ್ತಾ ಮೈ ತುಂಬ ಹುಳುವಾಗಿದ್ದವರನ್ನು ಯಾವುದೇ ಜಾತಿ-ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆಯನ್ನು ಮಾಡಿ ಮೂಲಭೂತ ಸೌಕರ್ಯಗಳಾದ ಊಟ, ವಸತಿ, ಬಟ್ಟೆ-ಬರೆ ಜೊತೆಗೆ ವೈದ್ಯಕೀಯ ಚಿಕಿತ್ಸೆ ನೀಡಿ, ಪುನರ್ವಸತಿ ವ್ಯವಸ್ಥೆ ಪೂರೈಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಈ ಚಟುವಟಿಕೆಗಳ ಹೊರತಾಗಿ, ಸಿಯೋನ್ ಆಶ್ರಮವು ವಿವಿಧ ಯೋಜನೆಗಳಾದ ಸಿಯೋನ್ ಸ್ವಸಹಾಯ ಸಂಘಗಳು, ಸಮುದಾಯ ಅಭಿವೃದ್ಧಿ, ಮಕ್ಕಳ ಪ್ರಾಯೋಜಕತ್ವ, ನಿರ್ಗತಿಕ ಮಕ್ಕಳಿಗೆ ಶಿಕ್ಷಣ ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ ಸಮಾಜಮುಖೀ ಕಾರ್ಯಚಟುಚಟಿಕೆಗಳಲ್ಲಿ ತೊಡಗಿಸಿಕೊಂಡಿದೆ.

ಸಿಯೋನ್ ಆಶ್ರಮವು ತನ್ನ ಬೆಳ್ಳಿಹಬ್ಬವನ್ನು2024ರ ಮಾರ್ಚ್ 22ರಂದು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಪ್ರಶಸ್ತಿ ಲಭಿಸಿರುವುದು ಸಕಾಲಿಕವಾಗಿದೆ.

Related posts

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya
error: Content is protected !!