25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

ಬೆಳ್ತಂಗಡಿ : ನೆರಿಯ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರಿಗೆ ಸಮಾಜ ಸೇವೆಗಾಗಿ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ 2023-24 ” ಕೇರಳದ ಕಣ್ಣೂರಿನಲ್ಲಿ ಮಾ.2 ರಂದು ಲಭಿಸಿದೆ.

ಸಿಯೋನ್ ಆಶ್ರಮ ಕಳೆದ 25 ವರ್ಷಗಳಿಂದ ಸಮಾಜದಲ್ಲಿ ಅಸಹಾಯಕತೆಯಿಂದ ಬೀದಿಪಾಲಾಗಿದ್ದ ಮನೋರೋಗಿಗಳು, ಬುದ್ಧಿಮಾಂದ್ಯರು, ಅಂಗವಿಕಲರು, ನಿರ್ಗತಿಕರು ಮತ್ತು ವಿಶೇಷ ಚೇತನ ಮಕ್ಕಳು, ವೃದ್ಧರು, ವಿಧವೆಯರು, ವಿವಿಧ ರೀತಿಯಲ್ಲಿ ದೌರ್ಜನ್ಯಕ್ಕೊಳಪಟ್ಟವರು, ಬಟ್ಟೆಬರೆಯಿಲ್ಲದೆ ಬೀದಿಯಲ್ಲಿ ತಿರುಗುತ್ತಾ ಮೈ ತುಂಬ ಹುಳುವಾಗಿದ್ದವರನ್ನು ಯಾವುದೇ ಜಾತಿ-ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆಯನ್ನು ಮಾಡಿ ಮೂಲಭೂತ ಸೌಕರ್ಯಗಳಾದ ಊಟ, ವಸತಿ, ಬಟ್ಟೆ-ಬರೆ ಜೊತೆಗೆ ವೈದ್ಯಕೀಯ ಚಿಕಿತ್ಸೆ ನೀಡಿ, ಪುನರ್ವಸತಿ ವ್ಯವಸ್ಥೆ ಪೂರೈಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಈ ಚಟುವಟಿಕೆಗಳ ಹೊರತಾಗಿ, ಸಿಯೋನ್ ಆಶ್ರಮವು ವಿವಿಧ ಯೋಜನೆಗಳಾದ ಸಿಯೋನ್ ಸ್ವಸಹಾಯ ಸಂಘಗಳು, ಸಮುದಾಯ ಅಭಿವೃದ್ಧಿ, ಮಕ್ಕಳ ಪ್ರಾಯೋಜಕತ್ವ, ನಿರ್ಗತಿಕ ಮಕ್ಕಳಿಗೆ ಶಿಕ್ಷಣ ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ ಸಮಾಜಮುಖೀ ಕಾರ್ಯಚಟುಚಟಿಕೆಗಳಲ್ಲಿ ತೊಡಗಿಸಿಕೊಂಡಿದೆ.

ಸಿಯೋನ್ ಆಶ್ರಮವು ತನ್ನ ಬೆಳ್ಳಿಹಬ್ಬವನ್ನು2024ರ ಮಾರ್ಚ್ 22ರಂದು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಪ್ರಶಸ್ತಿ ಲಭಿಸಿರುವುದು ಸಕಾಲಿಕವಾಗಿದೆ.

Related posts

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya
error: Content is protected !!