25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ ಅಗತ್ಯತೆಗೆ ಪೂರಕವಾಗಿ ಆರ್ಥಿಕ ಸಹಕಾರವನ್ನು ಈ ದಿನ ಹಸ್ತಾಂತರ ಮಾಡಲಾಯಿತು ಹಾಗೂ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ಸ್ಪರ್ಧಾ ಕಾರ್ಯಕ್ರಮಗಳ ಬಹುಮಾನ ವಿತರಣೆ ಮಾಡಲಾಯಿತು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ ಕೊಡಂಗೆ ರವರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಹಸ್ತಾಂತರಿಸಿದರು. ಸಂಘಟನೆಯ ಸಲಹೆಗಾರರಾದ ಉಮೇಶ್ ಸುವರ್ಣ ರವರು ಬಹುಮಾನ ವಿತರಿಸಿದರು

ಸಭೆಯಲ್ಲಿ ಟೀಂ ಅಭಯಹಸ್ತ ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ ,ಮುಖ್ಯಶಿಕ್ಷಕರಾದ ನಾಗಭೂಷಣ್, ಶಿಕ್ಷಕರಾದ ಸುಬ್ರಹ್ಮಣ್ಯ ಭಟ್, ಶ್ರೀಮತಿ ಶಾಂತಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!