25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ ಅಗತ್ಯತೆಗೆ ಪೂರಕವಾಗಿ ಆರ್ಥಿಕ ಸಹಕಾರವನ್ನು ಈ ದಿನ ಹಸ್ತಾಂತರ ಮಾಡಲಾಯಿತು ಹಾಗೂ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ಸ್ಪರ್ಧಾ ಕಾರ್ಯಕ್ರಮಗಳ ಬಹುಮಾನ ವಿತರಣೆ ಮಾಡಲಾಯಿತು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ ಕೊಡಂಗೆ ರವರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಹಸ್ತಾಂತರಿಸಿದರು. ಸಂಘಟನೆಯ ಸಲಹೆಗಾರರಾದ ಉಮೇಶ್ ಸುವರ್ಣ ರವರು ಬಹುಮಾನ ವಿತರಿಸಿದರು

ಸಭೆಯಲ್ಲಿ ಟೀಂ ಅಭಯಹಸ್ತ ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ ,ಮುಖ್ಯಶಿಕ್ಷಕರಾದ ನಾಗಭೂಷಣ್, ಶಿಕ್ಷಕರಾದ ಸುಬ್ರಹ್ಮಣ್ಯ ಭಟ್, ಶ್ರೀಮತಿ ಶಾಂತಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!