September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

ವೇಣೂರು : ಇಲ್ಲಿನ ಉಳ್ತುರು ಜುಮ್ಮಾ ಮಸೀದಿಯಲ್ಲಿ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ನಡೆದ ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ, ಇತ್ತೀಚೆಗೆ ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿಗೆ ಕರ್ನಾಟಕ ಸರಕಾರದಿಂದ ನಾಮ ನಿರ್ದೇಶನ ಹೊಂದಿದ ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆಯವರನ್ನು ಗೌರವಿಸಲಾಯಿತು.

ಉಳ್ತೂರು ಜುಮ್ಮಾ ಮಸೀದಿ ಮುದರೀಸ್ ಪಾಲಾಲಿಲ್ ಕಾಮಿಲ್ ಸಖಾಫಿ ಅಲ್ ಆರ್ಷದಿ ಪುರ್ಕಾನಿ ಮುದರ್ರಿಸ್ ಅಭಿನಂದನಾ ಭಾಷಣ ಮಾಡಿದರು. ಸಯ್ಯದ್ ತಾಹ ತಂಗಳ್ ಮಲಪುರಂ ಗೌರವಿಸಿದರು. ಸಭೆಯಲ್ಲಿ ಹಲವಾರು ಪ್ರದೇಶದ ಧರ್ಮಗುರುಗಳು, ಮಸೀದಿ ಅಧ್ಯಕ್ಷ ಅಬ್ಬಾಸ್ ಸಯ್ಯದ್ ಹಸನ್ ,ಎಚ್ ಮಹಮ್ಮದ್ ವೇಣೂರು ,ಅಶ್ರಫ್ ಶಾಂತಿನಗರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!