24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯದ್ಯಕ್ಷೆ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಮುಖಂಡೆ ಶ್ರೀಮತಿ ವಸಂತ ಮುರುಳಿ ಆಚಾರ್ಯ ಬೆಂಗಳೂರು ಹಾಗೂ ಉಪಾದ್ಯಕ್ಷೆ ಶ್ರೀಮತಿ ಆಶಾ ಗುರೂಜಿ ಉಮೇಶ್ ಆಚಾರ್ಯರವರು ಮಾ.4ರಂದು ಧರ್ಮಸ್ಥಳಕ್ಕೆ ಆಗಮಿಸಿ, ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

ನಂತರ ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರೂ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಗೇರುಕಟ್ಟೆಯ ಕೊರಂಜ ದಿವಾಕರ ಆಚಾರ್ಯರವರ ಮನೆಗೆ ಆಗಮಿಸಿ, ಆಶೀರ್ವಾದ ಪಡೆದರು.

ಇವರ ಜೊತೆ ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಭುವನೇಶ್ ಜಿ, ವೆನ್ಲಾಕ್ ಜಿಲ್ಲಾಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ,ನಾಳ ಶ್ರೀದುರ್ಗಾ ಪರಮೇಶ್ವರಿ ಯಕ್ಷಗಾನ ಮಂಡಳಿಯ ಪ್ರಬಂಧಕ ರಾಘವ ಎಚ್, ಪತ್ರಕರ್ತರಾದ ಕೆ.ಎನ್.ಗೌಡ,ಸತೀಶ್ ನಾಯ್ಕ್ ನಾಳ,ನಾಳ ದೇವಸ್ಥಾನದ ಮ್ಯಾನೇಜರ್ ಗಿರೀಶ್ ಶೆಟ್ಟಿ, ಉದ್ಯಮಿಗಳಾದ ಯೋಗಿಶ್ ಎಸ್.ಆರ್.ಹಾಜರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!