22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯದ್ಯಕ್ಷೆ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಮುಖಂಡೆ ಶ್ರೀಮತಿ ವಸಂತ ಮುರುಳಿ ಆಚಾರ್ಯ ಬೆಂಗಳೂರು ಹಾಗೂ ಉಪಾದ್ಯಕ್ಷೆ ಶ್ರೀಮತಿ ಆಶಾ ಗುರೂಜಿ ಉಮೇಶ್ ಆಚಾರ್ಯರವರು ಮಾ.4ರಂದು ಧರ್ಮಸ್ಥಳಕ್ಕೆ ಆಗಮಿಸಿ, ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

ನಂತರ ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರೂ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಗೇರುಕಟ್ಟೆಯ ಕೊರಂಜ ದಿವಾಕರ ಆಚಾರ್ಯರವರ ಮನೆಗೆ ಆಗಮಿಸಿ, ಆಶೀರ್ವಾದ ಪಡೆದರು.

ಇವರ ಜೊತೆ ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಭುವನೇಶ್ ಜಿ, ವೆನ್ಲಾಕ್ ಜಿಲ್ಲಾಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ,ನಾಳ ಶ್ರೀದುರ್ಗಾ ಪರಮೇಶ್ವರಿ ಯಕ್ಷಗಾನ ಮಂಡಳಿಯ ಪ್ರಬಂಧಕ ರಾಘವ ಎಚ್, ಪತ್ರಕರ್ತರಾದ ಕೆ.ಎನ್.ಗೌಡ,ಸತೀಶ್ ನಾಯ್ಕ್ ನಾಳ,ನಾಳ ದೇವಸ್ಥಾನದ ಮ್ಯಾನೇಜರ್ ಗಿರೀಶ್ ಶೆಟ್ಟಿ, ಉದ್ಯಮಿಗಳಾದ ಯೋಗಿಶ್ ಎಸ್.ಆರ್.ಹಾಜರಿದ್ದರು.

Related posts

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya
error: Content is protected !!