ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಭಾರಿಯ ಬಜೆಟ್‌ನಲ್ಲಿ ರಾಜ್ಯ ಸರಕಾರ ಜಿಲ್ಲೆಗೆ ಶೂನ್ಯ ಕೊಡುಗೆ ನೀಡಿ, ರೈತ ವಿದ್ಯಾನಿಧಿಯನ್ನು ನಿಲ್ಲಿಸಿದೆ. ರಾಜ್ಯದ ಜನತೆಗೆ ಶೂನ್ಯ ಅಭಿವೃದ್ಧಿ ಜೊತೆಗೆ, ಅನ್ಯಾಯ ಮಾಡುತ್ತಿದೆ. ಕಳೆದ 10 ವರ್ಷದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 2 ಲಕ್ಷ 78 ಸಾವಿರ ರೂಪಾಯಿ 854 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಆದರೆ ಕಾಂಗ್ರೆಸ್ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಹೇಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಮಾ.5ರಂದು ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಭಾಜಪಾ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.

Leave a Comment

error: Content is protected !!